July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಸುಬ್ರಹ್ಮಣ್ಯ ನಿಂದ ಧರ್ಮಸ್ಥಳಕ್ಕೆ ಆಗಮಿಸುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ನ.5 ರಂದು ಮನವಿ ಮಾಡಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರವು ಹಿಂದೂ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಟ್ಟ ಪ್ರವರ್ಗ “ಎ”ಗೆ ಸೇರಿದ ಅಧಿಸೂಚಿತ ದೇವಾಲಯವಾಗಿದೆ. ಪ್ರಸಕ್ತ ಸರ್ಕಾರದಿಂದ ಜಾರಿಯಾಗಿರುವ ನೂತನ ಯೋಜನೆಯಾದ “ಶಕ್ತಿ ಯೋಜನೆಯ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಶ್ರೀ ದೇವಳವು ದಿನೇ ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಖಾಸಗಿ ವಾಹನಗಳಲ್ಲಿ ಧರ್ಮಸ್ಥಳ ಹಾಗೂ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಬಹುತೇಕ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಸರ್ಕಾರಿ ಬಸ್ಸುಗಳಲ್ಲಿ ಆಗಮಿಸುವ ಭಕ್ತಾದಿಗಳಿಗೂ ಸುಲಭವಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

Related posts

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya
error: Content is protected !!