24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿರುವ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿರುವ ಶ್ರೀ ಗಂಗಾಂಬಿಕ ದೇವಸ್ಥಾನದಲ್ಲಿ ನ. 6 ರಂದು ನಡೆಯುವ 20 ನೇ ವರ್ಷದ ಗಂಗಾಷ್ಟಮಿ ಉತ್ಸವದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಕುಣಿತ ಭಜನೆಯನ್ನು ನೀಡಲು ಅಲ್ಲಿನ ಆಡಳಿತ ಮಂಡಳಿಯವರು ಆಹ್ವಾನವನ್ನು ನೀಡಿದ್ದಾರೆ.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮರವರು ನಮ್ಮ ಮಂಡಳಿಯ ಎಲ್ಲಾ ಸದಸ್ಯರ ಉತ್ತಮ ಪಾಲ್ಗೊಳ್ಳುವಿಕೆಯಿಂದ ಎಲ್ಲಾ ಕಡೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಮಂತ್ರಿಸುತ್ತಿದ್ದು ದೂರದ ಉತ್ತರ ಕನ್ನಡ ಜಿಲ್ಲೆಯವರು ನಮ್ಮ ಮಂಡಳಿಯನ್ನು ಗುರುತಿಸಿ ಅಲ್ಲಿನ ಹೆಸರಾಂತ ದೇವಸ್ಥಾನದಲ್ಲಿ ನಡೆಯುವ ಉತ್ಸವಕ್ಕೆ ಆಹ್ವಾನಿಸಿರುವುದು ತುಂಬಾ ಖುಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya
error: Content is protected !!