23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ವರ್ಷದ ಸೇವಾ ಚಟುವಟಿಕೆ ವಿಸ್ತರಣೆಯ ಅಂಗವಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ದಂದು ಬೆಳ್ತಂಗಡಿ ಮಾದರಿ ಶಾಲೆಗೆ ಶುದ್ಧ ನೀರು ಯಂತ್ರವನ್ನು ಕೊಡುಗೆಯಾಗಿ ‌ನೀಡಲಾಯಿತು.


ಬೆಳ್ತಂಗಡಿ ಲಯನ್ಸ್ ಸ್ಥಾಪಕ ಸದಸ್ಯ, ಆರ್ಯಭಟ ಪ್ರಶಸ್ತಿ ಪುರಸ್ಕೃತ ವಿ.ಆರ್ ನಾಯ್ಕ್ ಅವರ ಪ್ರಾಯೋಜಕತ್ವ ದಲ್ಲಿ ಈ ಯಂತ್ರವನ್ನು ಜಿಲ್ಲಾ ರಾಜ್ಯಪಾಲ ಡಾ.ಮೆಲ್ವಿನ್ ಡಿಸೋಜಾ ಮತ್ತು ಲಯನ್ಸ್ ಜಿಲ್ಲೆಯ ಪ್ರಥಮ ಮಹಿಳೆ ಸ್ಮಿತಾ‌ ಡಿಸೋಜಾ ಶಾಲೆಗೆ ಹಸ್ತಾಂತರಿಸಿದರು.


ಕೊಡಗೆ ಸ್ವೀಕರಿಸಿದ ಶಾಲಾ ಮುಖ್ಯೋಪಾಧ್ಯಾಯ ಸೂರ್ಯನಾರಾಯಣ ಭಟ್ ಅವರು ಕೃತಜ್ಞತೆ ಸಲ್ಲಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಾಲ್ಡ್ ಡಿಸೋಜಾ, ‌ಲಿಯೋ ವಿಭಾಗದ ಅಧ್ಯಕ್ಷೆ ಡಾ. ಕಾವು ರಂಜಿತಾ ಶೆಟ್ಟಿ, ಪ್ರಮುಖರಾದ ವಿ.ಆರ್ ನಾಯ್ಕ್,
ಲಯನ್ಸ್ ಕ್ಲಬ್ ಕಾರ್ಯದರ್ಶಿ ಅನಂತಕೃಷ್ಣ, ‌ಕೋಶಾಧಿಕಾರಿ ಶುಭಾಷಿಣಿ, ಪ್ರಮುಖರಾದ ಬಿ‌.ಪಿ ಅಶೋಕ್ ಕುಮಾರ್, ಅಶ್ರಫ್ ಆಲಿಕುಂಞಿ, ಮೇದಿನಿ ಡಿ ಗೌಡ, ದತ್ತಾತ್ರೇಯ ಗೊಲ್ಲ, ಜಯರಾಂ ಭಂಡಾರಿ, ಜಗನ್ನಾಥ ಶೆಟ್ಟಿ, ಶಾಲಾ
ಶಿಕ್ಷಕವೃಂದದವರಾದ ರೇಣುಕಾ, ಅಕ್ಷತಾ, ಸವಿತಾ, ಜಯಶ್ರೀ, ಚಿತ್ರಾ, ಪ್ರಶಿಕ್ಷಣಾರ್ಥಿ ಪ್ರಮೀಳಾ ಉಪಸ್ಥಿತರಿದ್ದರು.

ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ಸಂಯೋಜಿಸಿದರು. ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya
error: Content is protected !!