25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ವರ್ಷದ ಸೇವಾ ಚಟುವಟಿಕೆ ವಿಸ್ತರಣೆಯ ಅಂಗವಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ದಂದು ಬೆಳ್ತಂಗಡಿ ಮಾದರಿ ಶಾಲೆಗೆ ಶುದ್ಧ ನೀರು ಯಂತ್ರವನ್ನು ಕೊಡುಗೆಯಾಗಿ ‌ನೀಡಲಾಯಿತು.


ಬೆಳ್ತಂಗಡಿ ಲಯನ್ಸ್ ಸ್ಥಾಪಕ ಸದಸ್ಯ, ಆರ್ಯಭಟ ಪ್ರಶಸ್ತಿ ಪುರಸ್ಕೃತ ವಿ.ಆರ್ ನಾಯ್ಕ್ ಅವರ ಪ್ರಾಯೋಜಕತ್ವ ದಲ್ಲಿ ಈ ಯಂತ್ರವನ್ನು ಜಿಲ್ಲಾ ರಾಜ್ಯಪಾಲ ಡಾ.ಮೆಲ್ವಿನ್ ಡಿಸೋಜಾ ಮತ್ತು ಲಯನ್ಸ್ ಜಿಲ್ಲೆಯ ಪ್ರಥಮ ಮಹಿಳೆ ಸ್ಮಿತಾ‌ ಡಿಸೋಜಾ ಶಾಲೆಗೆ ಹಸ್ತಾಂತರಿಸಿದರು.


ಕೊಡಗೆ ಸ್ವೀಕರಿಸಿದ ಶಾಲಾ ಮುಖ್ಯೋಪಾಧ್ಯಾಯ ಸೂರ್ಯನಾರಾಯಣ ಭಟ್ ಅವರು ಕೃತಜ್ಞತೆ ಸಲ್ಲಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಾಲ್ಡ್ ಡಿಸೋಜಾ, ‌ಲಿಯೋ ವಿಭಾಗದ ಅಧ್ಯಕ್ಷೆ ಡಾ. ಕಾವು ರಂಜಿತಾ ಶೆಟ್ಟಿ, ಪ್ರಮುಖರಾದ ವಿ.ಆರ್ ನಾಯ್ಕ್,
ಲಯನ್ಸ್ ಕ್ಲಬ್ ಕಾರ್ಯದರ್ಶಿ ಅನಂತಕೃಷ್ಣ, ‌ಕೋಶಾಧಿಕಾರಿ ಶುಭಾಷಿಣಿ, ಪ್ರಮುಖರಾದ ಬಿ‌.ಪಿ ಅಶೋಕ್ ಕುಮಾರ್, ಅಶ್ರಫ್ ಆಲಿಕುಂಞಿ, ಮೇದಿನಿ ಡಿ ಗೌಡ, ದತ್ತಾತ್ರೇಯ ಗೊಲ್ಲ, ಜಯರಾಂ ಭಂಡಾರಿ, ಜಗನ್ನಾಥ ಶೆಟ್ಟಿ, ಶಾಲಾ
ಶಿಕ್ಷಕವೃಂದದವರಾದ ರೇಣುಕಾ, ಅಕ್ಷತಾ, ಸವಿತಾ, ಜಯಶ್ರೀ, ಚಿತ್ರಾ, ಪ್ರಶಿಕ್ಷಣಾರ್ಥಿ ಪ್ರಮೀಳಾ ಉಪಸ್ಥಿತರಿದ್ದರು.

ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ಸಂಯೋಜಿಸಿದರು. ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು.

Related posts

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya
error: Content is protected !!