23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಸುಲ್ಕೇರಿಮೊಗ್ರು:ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವರ ಜಂಟಿ ಆಶ್ರಯದಲ್ಲಿ ನಿರಂಜನ ಶಾಂತಿ ಇವರ ಪೌರೋಹಿತ್ಯದಲ್ಲಿ ಗುರು ಪೂಜೆ, ಹಾಗೂ ದೀಕ್ಷಾ ಗ್ರಂಥಿಧಾರಣೆ ಕಾರ್ಯಕ್ರಮವು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನ.5 ರಂದು ನೆರವೇರಿತು.

ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನಾ ಸಮಾರಂಭ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಮಾಜಿ ಅಧ್ಯಕ್ಷ ಎಂ. ಗಂಗಾಧರ್ ಮಿತ್ತಮಾರು ನೇರವೇರಿಸಿ ಶುಭಕೋರಿದರು.

ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಸುಲ್ಕೇರಿಮೊಗ್ರು ಇದರ ಅಧ್ಯಕ್ಷ ಸಂಕೇತ್ ಬಂಗೇರ ವಹಿಸಿದ್ದರು.

ವೇದಿಕೆಯಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ,ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೇಶ್ ಕೋಟ್ಯಾನ್,ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ಶಾಂಭವಿ ಬಂಗೇರ.ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘದ ಮಾಜಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಪ್ರಮುಖರಾದ ಸತೀಶ್ ಪೂಜಾರಿ, ಮುಂಬಾಯಿ, ನವೀನ್ ಸಾಲಿಯಾನ್ ಪಾಲ್ದಿಮನೆ, ಶ್ರೀಮತಿ ಗೀತಾ. ಎಚ್. ಅಮ್ಮಾಜಿ ಹೊಕ್ಕಳ, ಗುರುವಪ್ಪ ಪೂಜಾರಿ ಪಟ್ಲ ಕೆ. ಸಂಜೀವ ಪೂಜಾರಿ ಕೊಡಂಗೆ, ಕೊರಗಪ್ಪ ಪೂಜಾರಿ ದಾಯಿಗುಡ್ಡೆ, ವಿಶ್ವನಾಥ ಪೂಜಾರಿ ಕುದ್ಯಾಡಿ, ನವೀನ್ ಕುಮಾರ್ ಪಾದೆಮಾರಡ್ಡ, ಕೊರಗಪ್ಪ ಪೂಜಾರಿ,ಪ್ರವೀಣ್ ಕೋಟ್ಯಾನ್ ಪಾಲಣೆ, ಸಂತೋಷ್ ಕೋಟ್ಯಾನ್ ಬಳಂಜ ಉಪಸ್ಥಿತರಿದ್ದರು.

ಪ್ರಾರ್ಥನೆಯನ್ನು ಧನುಷ್. ಕಾಡಂಗೆ ಮಾಡಿ, ವಿಜಯ್ ಕುಮಾರ್ ಸ್ವಾಗತಿಸಿ, ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿ, ನಂದನ್ ಕುಮಾರ್ ಧನ್ಯವಾದವಿತ್ತರು.

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!