24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ ಹಲವಾರು ಉಪಯುಕ್ತ ಸೇವೆ ಸಲ್ಲಿಸಿದರ ಫಲವಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಯು.ಟಿ ಖಾದರ್, ಎಸ್.ಡಿ.ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರು ಸುರೇಂದ್ರ ಕುಮಾರ್ ಧರ್ಮಸ್ಥಳ, ದಾವಣಗೆರೆ ಮಹಾರಾಜಸೋಪ್ಸ್ ಆಂಡ್ ಡಿರ್ಟಜೆಂಟ್ ಪ್ರೈವೇಟ್ ಲಿ. ಮಾನೇಂಜಿಗ್ ಡೈರೆಕ್ಟರ್ ಡಾ. ಎಂ. ಇ ರವಿರಾಜ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷ ಕೆ. ಕೇಶ ಶಯನ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧೀಕಾರದ ಸಿಇಒ ಡಾ| ಅಶೋಕ್ ದಾಳವಾಯಿ, ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಇತರರು ಉಪಸ್ಥಿತರಿದ್ದರು.

Related posts

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!