25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ರಂಗಭೂಮಿಯಲ್ಲಿ ಮಾಡಿದ ಮಹಾ ಸಾಧನೆಗಾಗಿ ಕಲಾ ರತ್ನ ಪ್ರಶಸ್ತಿ ನೀಡಿ ನ.4ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿದರು.

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಮಾಜದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಅತ್ತಾವರದಲ್ಲಿ ನಡೆಯಿತು.

ರವಿಚಂದ್ರ ಬಿ ಸಾಲಿಯಾನ್ ವೇಣೂರು ಇವರು ರಂಗಭೂಮಿಯಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡು ಸುಮಾರು 30ನಾಟಕಗಳನ್ನು ರಚಿಸಿದ್ದಾರೆ ಇವರ ನಾಟಕಗಳು ಕರಾವಳಿ ಮಾತ್ರವಲ್ಲದೇ, ದೂರದ ಮುಂಬೈಯಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ಸ್ತ್ರೀ ಪಾತ್ರದಾರಿಯಾಗಿ ಇವರು ಕರಾವಳಿಯ ನಾಟಕ ರಂಗದಲ್ಲಿ ಅದ್ಬುತ ಸಾಧನೆ ಮಾಡಿರುವ ಇವರಿಗೆ ಅದೆಷ್ಡೋ ಪ್ರಶಸ್ತಿಗಳು ಅರಸಿ ಬಂದಿವೆ.

ವೇಣೂರಿನಲ್ಲಿ ಫಲ್ಗುಣಿ ಕಲಾತಂಡ ಎಂಬ ನಾಟಕ ತಂಡವನ್ನು ಎರಡು ದಶಕಗಳ ಹಿಂದೆ ತನ್ನ ಸ್ನೇಹಿತ ಹೇಮಂತ್ ಕುಮಾರ್ ಭಟ್ ಬಡಕೋಡಿ ಇವರೊಂದಿಗೆ ಕಟ್ಟಿ ಆ ತಂಡದ ಮೂಲಕ ಜಿಲ್ಲೆಯಾದ್ಯಂತ ಕಲಾ ಸೇವೆ ನೀಡುತ್ತಿದ್ದಾರೆ.

Related posts

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!