24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐ ವಲಯ 15 ರ ವಾರ್ಷೀಕ ಸಮ್ಮೇಳನ ಸಂಭ್ರಮ 2023 ಪುತ್ತೂರಿನಲ್ಲಿ ನಡೆಯಿತು.
ಈ ವರ್ಷ ಘಟಕಗಳು ಮಾಡಿದ ಕೆಲಸ ಕಾರ್ಯಗಳನ್ನು ಗುರುತಿಸುವ ಈ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಸಮಗ್ರ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದೆ.


ಕಮ್ಯೂನಿಟಿ ಡೆವಲಪ್ಮೆಂಟ್ ವಿಭಾಗದಲ್ಲಿ ಅತ್ಯುತ್ತಮ ಘಟಕ, ಅತ್ಯುತ್ತಮ ಮಹಿಳಾ ವಿಭಾಗ ಮಮಿತಾ ಸುಧೀರ್ ವಿನ್ನರ್, ಅತ್ಯುತ್ತಮ ನ್ಯೂ ಜೆಸಿ ಶೈಲೇಶ್ ವಿನ್ನರ್ ಪ್ರಶಸ್ತಿ , ನ್ಯಾಷನಲ್ ಫ್ಲಾಗ್ ಶಿಪ್ ವಿನ್ನರ್, ಇಂಡಿವಿಜುಯಲ್ ಡೆವಲಪ್ಮೆಂಟ್ ತರಬೇತಿ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ, ಪರಿಸರ ದಿನಾಚರಣೆ ಕಾರ್ಯಕ್ರಮ ಕ್ಕೆ ಮನ್ನಣೆ,
ಧಾನ್ ಕಾರ್ಯಕ್ರಮಗಳ ಆಯೋಜನೆಯಲ್ಲಿ ವಿನ್ನರ್, ಘಟಕದಿಂದ ಮೂಡಿಬಂದ 5 ಜನ ತರಬೇತುದಾರರಿಗೆ ಮನ್ನಣೆ ಹಾಗೂ ಅತ್ಯುತ್ತಮ ಜೂನಿಯರ್ ಜೆಸಿ ತಂಡಕ್ಕೆ ಮನ್ನಣೆಯನ್ನ ಬೆಳ್ತಂಗಡಿಯು ಪಡೆದುಕೊಂಡಿದೆ.

ವಲಯ ಉಪಾಧ್ಯಕ್ಷರಾಗಿ ಶಂಕರ್ ರಾವ್:

ಈ ವರ್ಷ ಬೆಳ್ತಂಗಡಿಯನ್ನು ಮುನ್ನಡೆಸಿದ ನಾಯಕ ಶಂಕರ್ ರಾವ್ ವಾರ್ಷೀಕ ಸಮ್ಮೇಳನದಲ್ಲಿ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಅತ್ಯಧಿಕ ಮತ ಗಳಿಸಿ ವಲಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಸಮ್ಮೇಳನದಲ್ಲಿ ಘಟಕ ಅಧ್ಯಕ್ಷ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ.ಎನ್, ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ ಎಸ್, ಪೂರ್ವಧ್ಯಕ್ಷ ಚಿದಾನಂದ ಇಡ್ಯಾ, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಪ್ರೀತಮ್ ಶೆಟ್ಟಿ, ಮಹಿಳಾ ಸಂಯೋಜಕಿ ಮಮಿತಾ ಸುಧೀರ್, ಕಾರ್ಯಕ್ರಮ ವಿಭಾಗದ ನಿರ್ದೇಶಕರಾದ ಚಂದ್ರಹಾಸ ಬಳಂಜ, ಸದಸ್ಯರಾದ ಶೈಲೇಶ್ ಹಾಗೂ ಜ್ಯೂನಿಯರ್ ಜೆಸಿ ನಾಯಕ ರಾಮಕೃಷ್ಣ ಶರ್ಮಾ ರವರು ಭಾಗವಹಿಸಿದರು‌.

Related posts

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!