22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐ ವಲಯ 15 ರ ವಾರ್ಷೀಕ ಸಮ್ಮೇಳನ ಸಂಭ್ರಮ 2023 ಪುತ್ತೂರಿನಲ್ಲಿ ನಡೆಯಿತು.
ಈ ವರ್ಷ ಘಟಕಗಳು ಮಾಡಿದ ಕೆಲಸ ಕಾರ್ಯಗಳನ್ನು ಗುರುತಿಸುವ ಈ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಸಮಗ್ರ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದೆ.


ಕಮ್ಯೂನಿಟಿ ಡೆವಲಪ್ಮೆಂಟ್ ವಿಭಾಗದಲ್ಲಿ ಅತ್ಯುತ್ತಮ ಘಟಕ, ಅತ್ಯುತ್ತಮ ಮಹಿಳಾ ವಿಭಾಗ ಮಮಿತಾ ಸುಧೀರ್ ವಿನ್ನರ್, ಅತ್ಯುತ್ತಮ ನ್ಯೂ ಜೆಸಿ ಶೈಲೇಶ್ ವಿನ್ನರ್ ಪ್ರಶಸ್ತಿ , ನ್ಯಾಷನಲ್ ಫ್ಲಾಗ್ ಶಿಪ್ ವಿನ್ನರ್, ಇಂಡಿವಿಜುಯಲ್ ಡೆವಲಪ್ಮೆಂಟ್ ತರಬೇತಿ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ, ಪರಿಸರ ದಿನಾಚರಣೆ ಕಾರ್ಯಕ್ರಮ ಕ್ಕೆ ಮನ್ನಣೆ,
ಧಾನ್ ಕಾರ್ಯಕ್ರಮಗಳ ಆಯೋಜನೆಯಲ್ಲಿ ವಿನ್ನರ್, ಘಟಕದಿಂದ ಮೂಡಿಬಂದ 5 ಜನ ತರಬೇತುದಾರರಿಗೆ ಮನ್ನಣೆ ಹಾಗೂ ಅತ್ಯುತ್ತಮ ಜೂನಿಯರ್ ಜೆಸಿ ತಂಡಕ್ಕೆ ಮನ್ನಣೆಯನ್ನ ಬೆಳ್ತಂಗಡಿಯು ಪಡೆದುಕೊಂಡಿದೆ.

ವಲಯ ಉಪಾಧ್ಯಕ್ಷರಾಗಿ ಶಂಕರ್ ರಾವ್:

ಈ ವರ್ಷ ಬೆಳ್ತಂಗಡಿಯನ್ನು ಮುನ್ನಡೆಸಿದ ನಾಯಕ ಶಂಕರ್ ರಾವ್ ವಾರ್ಷೀಕ ಸಮ್ಮೇಳನದಲ್ಲಿ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಅತ್ಯಧಿಕ ಮತ ಗಳಿಸಿ ವಲಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಸಮ್ಮೇಳನದಲ್ಲಿ ಘಟಕ ಅಧ್ಯಕ್ಷ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ.ಎನ್, ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ ಎಸ್, ಪೂರ್ವಧ್ಯಕ್ಷ ಚಿದಾನಂದ ಇಡ್ಯಾ, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಪ್ರೀತಮ್ ಶೆಟ್ಟಿ, ಮಹಿಳಾ ಸಂಯೋಜಕಿ ಮಮಿತಾ ಸುಧೀರ್, ಕಾರ್ಯಕ್ರಮ ವಿಭಾಗದ ನಿರ್ದೇಶಕರಾದ ಚಂದ್ರಹಾಸ ಬಳಂಜ, ಸದಸ್ಯರಾದ ಶೈಲೇಶ್ ಹಾಗೂ ಜ್ಯೂನಿಯರ್ ಜೆಸಿ ನಾಯಕ ರಾಮಕೃಷ್ಣ ಶರ್ಮಾ ರವರು ಭಾಗವಹಿಸಿದರು‌.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!