25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್‌ನ ಟವರ್ ಕುಸಿದು ಬಿದ್ದ ಸ್ಥಳದಲ್ಲಿ ಇಂದು ಟವರ್ ಬದಲಿಗೆ ವಿದ್ಯುತ್ ಕಂಬ ಅಳವಡಿಸಿ, ಧರ್ಮಸ್ಥಳ ಕಡೆಗೆ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಉಜಿರೆ ಮೆಸ್ಕಾಂ ಉಪವಿಭಾಗದ ಸ.ಕಾ. ಅಭಿಯಂತರಾದ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ತಿಳಿಸಿದ್ದಾರೆ. ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ್ದ ಮೆಸ್ಕಾಂ ಪವರ್ ಮ್ಯಾನ್, ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ಅವರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭ ಪವರ್ ಪ್ರೊಜೆಕ್ಟ್ ನ ಸಿಬ್ಬಂದಿಗಳು ಬಂದಿದ್ದ ಒಂದು ಕಾರು ಮತ್ತು ಬೈಕ್‌ನ ಮೇಲೆಯೇ ವಾಲಿಕೊಂಡು ಬಂದಿದ್ದ ಟವರ್ ಬಿದ್ದು, ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದರು.

ಮೆಸ್ಕಾಂ ಇಲಾಖೆಯ ತುರ್ತು ಸ್ಪಂದನೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿತ್ತು. ಟವರ್ ಕುಸಿತದ ಕಾರಣ ಸ್ಥಗಿತಗೊಂಡಿ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಬದಲಿ ಕಂಬದ ವ್ಯವಸ್ಥೆ ಮಾಡಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya
error: Content is protected !!