23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್‌ನ ಟವರ್ ಕುಸಿದು ಬಿದ್ದ ಸ್ಥಳದಲ್ಲಿ ಇಂದು ಟವರ್ ಬದಲಿಗೆ ವಿದ್ಯುತ್ ಕಂಬ ಅಳವಡಿಸಿ, ಧರ್ಮಸ್ಥಳ ಕಡೆಗೆ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಉಜಿರೆ ಮೆಸ್ಕಾಂ ಉಪವಿಭಾಗದ ಸ.ಕಾ. ಅಭಿಯಂತರಾದ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ತಿಳಿಸಿದ್ದಾರೆ. ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ್ದ ಮೆಸ್ಕಾಂ ಪವರ್ ಮ್ಯಾನ್, ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ಅವರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭ ಪವರ್ ಪ್ರೊಜೆಕ್ಟ್ ನ ಸಿಬ್ಬಂದಿಗಳು ಬಂದಿದ್ದ ಒಂದು ಕಾರು ಮತ್ತು ಬೈಕ್‌ನ ಮೇಲೆಯೇ ವಾಲಿಕೊಂಡು ಬಂದಿದ್ದ ಟವರ್ ಬಿದ್ದು, ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದರು.

ಮೆಸ್ಕಾಂ ಇಲಾಖೆಯ ತುರ್ತು ಸ್ಪಂದನೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿತ್ತು. ಟವರ್ ಕುಸಿತದ ಕಾರಣ ಸ್ಥಗಿತಗೊಂಡಿ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಬದಲಿ ಕಂಬದ ವ್ಯವಸ್ಥೆ ಮಾಡಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!