July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು.


ಬೆಳ್ತಂಗಡಿ ನಗರದ ಒಳಗಚರಂಡಿ ಕೃಷಿ ಇಲಾಖೆ ಬಳಿಯಿಂದ ಹಾದುಹೋಗಿದ್ದು, ಒಳಚರಂಡಿಯ ಮೇಲ್ಗಡೆ ಸ್ಲೇಫ್ ಹಾಕದೆ ಹಲವು ವರ್ಷಗಳು ಕಳೆದಿದೆ. ಒಳಚರಂಡಿ ಓಪನ್ ಆಗಿದ್ದು, ಇಂದು ಬೆಳಿಗ್ಗೆ ಬೀಡಾಡಿ ದನವೊಂದು ಮೇಯುತ್ತಾ ಬಂದು ಒಳಚರಂಡಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಮೇಲೆ ಹತ್ತಲಾಗದೆ ಒದ್ದಾಡುತ್ತಿದ್ದ ದನವನ್ನು ಕಂಡು ಸ್ಥಳೀಯರು ಕೃಷಿ ಇಲಾಖೆಯವರ ಹಾಗೂ ನಗರ ಪಂಚಾಯತದ ಗಮನಕ್ಕೆ ತಂದಿದ್ದರು. ಬಳಿಕ ಬೆಳ್ತಂಗಡಿ ಅಗ್ನಿಶಾಮಕದವರಿಗೆ ಮಾಹಿತಿ ನೀಡಿ, ಅವರು ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಒಳಚರಂಡಿಯಲ್ಲಿ ಸಿಲುಕಿಕೊಂಡಿದ್ದ ದನವನ್ನು ಮೇಲೆತ್ತಲಾಯಿತು. ಇಲ್ಲಿ ಈಗಾಗಲೇ ಮೂರ‍್ನಾಲ್ಕು ಇಂತಹ ಘಟನೆಗಳು ಈಗಾಗಲೇ ನಡೆದಿದೆ. ಕೃಷಿ ಇಲಾಖೆಯ ಅಧಿಕಾರಿಗಳು ನ.ಪಂ ಸದಸ್ಯ ಜಗದೀಶ್, ನ.ಪಂ ಕರುಣಾಕರ್ ಮತ್ತಿತರರು ಉಪಸ್ಥಿತರಿದ್ದರು. ಒಳಚರಂಡಿಗೆ ಮೇಲ್ಗಡೆ ಸ್ಲಾಬ್ ಹಾಕಲು 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಇಡಲಾಗಿದ್ದು, ಟೆಂಡರ್ ಹಂತದಲ್ಲಿದೆ. ಇದರ ಕಾಮಗಾರಿ ಶೀಘ್ರವಾಗಿ ನಡೆಯಲಿದೆ ಎಂದು ಜಗದೀಶ್ ಡಿ. ತಿಳಿಸಿದ್ದಾರೆ.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya
error: Content is protected !!