25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya
error: Content is protected !!