July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ ಅಬ್ದುಲ್ ರಹಿಮಾನ್ ರವರು ಶ್ರಮದಾನದ ನೇತೃತ್ವ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.
ಕುರ್ಲೋಟ್ಟು ವಿನಿಂದ ಹೊಸಂಗಡಿ ಪಂಚಾಯತ್ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಕುರ್ಲೋಟ್ಟು ಐದು ಸೆಂಟ್ಸ್ ಕಾಲನಿ, ಅಂಗಡಿ ಮುಗ್ಗಟ್ಟು ಗಳಲ್ಲಿ ಹಾಗೂ ಕುರ್ಲೋಟ್ಟು ಮತ್ತು ಪದ್ದಂದಡ್ಕ ಗಳ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚ ಗೊಳಿಸಲಾಯಿತು.


ಆಶಾ ಕಾರ್ಯಕರ್ತೆ , ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸುಮಾರು 75 ಸ್ವಯಂ ಸೇವಕರು, ವಿದ್ಯಾರ್ಥಿಗಳು, ಬಿಎಸ್.ಡ್ಲ್ಯೂ ವಿದ್ಯಾರ್ಥಿ ಶ್ರಮದಾನದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು,

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!