July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

ಶಿರ್ಲಾಲು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮವು ನ. 13 ರಂದು 10 ಗಂಟೆಗೆ “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನುಮೋನಪ್ಪ ಮೂಲ್ಯ ನಲ್ಲಾರಗುತ್ತು ರವರು ಮಾಡಲಿದ್ದಾರೆ. ಅಧ್ಯಕ್ಷರಾಗಿ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ.
ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟನೆಯನ್ನು ತುಳುನಾಡು ಒಕ್ಕೂಟ ಬೆಳ್ತಂಗಡಿ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್.ಜೆ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ. ಕ್ಷೇ.ಧ.ಗ್ರಾ. ಯೋಜನೆ ಚಿತ್ರದುರ್ಗ ಇದರ ಯೋಜನಾಧಿಕಾರಿಗಳು ಪ್ರವೀಣ್ ಎ.ಜೆ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಕಾರ್ಯದರ್ಶಿ ಸದಾಶಿವ ಶಿವಗಿರಿ ಮತ್ತು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಮಾಜಿ ಅಧ್ಯಕ್ಷರಾದ ಸುರೇಶ್ ಮೂಲ್ಯ ಕೊಚ್ಚೊಟ್ಟು ವಹಿಸಲಿದ್ದಾರೆ.

ಕಾರ್ಯಕ್ರಮದ ವಿಶೇಷತೆ: ಕೆಸರು ಗದ್ದೆ ಕ್ರೀಡಾಕೂಟ, ಮಕ್ಕಳಿಗೆ ಗ್ರಾಮೀಣ ಕ್ರೀಡಾಕೂಟ , ಕಂಬಳದ ಕೋಣಗಳ ಓಟ ನಡೆಯಲಿದೆ.

Related posts

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya
error: Content is protected !!