25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ ದೀಪಾವಳಿ ದೋಸೆ ಹಬ್ಬವು ಈ ಬಾರಿ ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ.

ಬೆಳಗ್ಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆ ನಡೆಯಲಿದೆ. ಬೆಳ್ತಂಗಡಿ ನಗರದಾದ್ಯಂತ ದೀಪಾಲಂಕಾರ, ಸಂಜೆ ಗೋಪೂಜೆ, ಹಣತೆಗಳ ಸಾಲು, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ ಆರ್ಯಭಟ ಪ್ರಶಸ್ತಿ ವಿಜೇತ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಮಾರೋಪ ಕಾರ್ಯಕ್ರಮದ ಬಳಿಕ ಮಂಗಳೂರಿನ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ತಂಡದಿಂದ ಮೈತಿದಿ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ದೀಪಾವಳಿ ದೋಸೆ ಹಬ್ಬದ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು‌.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ, ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya
error: Content is protected !!