September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ : ಇತಿಹಾಸ ಪ್ರಸಿದ್ಧ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಡಿಸೆಂಬರ್ 24 ರಿಂದ 28 ರವರೆಗೆ ನಡೆಯಲಿದ್ದು ಆ ಪ್ರಯುಕ್ತ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಭಕ್ತ ಸಮುದಾಯದ ಸಭೆಯು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದಲ್ಲಿ ಸರ್ವ ರೀತಿಯಲ್ಲೂ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ದೇವರ ಕಾರ್ಯದಲ್ಲಿ ಸಂಪೂರ್ಣವಾಗಿ ಭಾಗವಹಿಸಿಕೊಂಡಾಗ ನಮ್ಮ ಪಾಲಿಗೆ ಪುಣ್ಯ ಪ್ರಾಪ್ತಿಯಾಗಲು ಸಾಧ್ಯವಾಗುತ್ತದೆ. ದೇವರು ಸಂತುಷ್ಟರಾಗುವ ಜೊತೆಗೆ ಭಕ್ತ ಸಮುದಾಯ ಸಂಭ್ರಮಿಸುವ ರೀತಿಯಲ್ಲಿ ಬ್ರಹ್ಮಕಲಶವನ್ನು ಅದ್ದೂರಿಯಾಗಿ ನೆರವೇರಿಸಲು ಎಲ್ಲರೂ ಒಂದಾಗಿ ಸಹಕರಿಸಬೇಕು ಎಂದರು.

ಬ್ರಹ್ಮಕಲಶವನ್ನು ಯಶಸ್ವಿಯಾಗಿ ನಡೆಸುವ ನೆಲೆಯಿಂದ ವಿವಿಧ ಸಮಿತಿ, ಸಂಚಾಲಕರು, ಸದಸ್ಯರನ್ನು ಮಾಡಲಾಗಿದೆ. ಆದರೆ ಭಕ್ತರೆಲ್ಲರ ಒಮ್ಮನಸ್ಸಿನ ಸೇವಾ ಕಾರ್ಯವೇ ಬ್ರಹ್ಮಕಲಶದ ಯಶಸ್ಸಿಗೆ ಕಾರಣವಾಗುತ್ತದೆ ಎಂದ ಅವರು ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಅರ್ಚಕ ಸೂರ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ಒಡಿಮಾರ್, ಆಡಳಿತ ಸಮಿತಿ ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು, ಮಹಿಳಾ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!