23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಡಂತ್ಯಾರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಒಟ್ಟು ಐದು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿರುತ್ತಾರೆ.

ಹತ್ತನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಭಾಷಣ ಪ್ರಥಮ, ಎಂಟನೇ ತರಗತಿಯ ಕುಮಾರಿ ವಿನನ್ಯ ಸಂಸ್ಕೃತ ಭಾಷಣ ಪ್ರಥಮ, ಹತ್ತನೇ ತರಗತಿಯ ಕುಮಾರಿ ಹರ್ಷಿತ ಛದ್ಮವೇಷ ಪ್ರಥಮ, ಎಂಟನೇ ತರಗತಿಯ ಕುಮಾರಿ ಪಂಚಮಿ ಚಿತ್ರಕಲೆ ಪ್ರಥಮ, ಸ್ಥಾನಗಳನ್ನು ಗಳಿಸಿ, ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಾಗೂ 9ನೇ ತರಗತಿಯ ಖೈರುನ್ನೀಸಾ ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿರುತ್ತಾರೆ.

ಮುಖ್ಯೋಪಾಧ್ಯಾಯರ ಮಾರ್ಗದರ್ಶನದಲ್ಲಿ ಅಧ್ಯಾಪಕ ಬಂಧುಗಳು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

Related posts

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!