September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

ಬೆಳ್ತಂಗಡಿ: ಸುವರ್ಣ ಮಹೋತ್ಸವ ವರ್ಷದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ನ‌ ಬಗ್ಗೆ ನಾವು ಮಾತನಾಡುವ ಮುನ್ನ ಅವರ ಸೇವೆಯೇ ಲಯನ್ಸ್ ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ನನ್ನ ಅಧಿಕೃತ ಭೇಟಿಯ ದಿನ ಈ‌ ಕ್ಲಬ್ ನೀಡಿದ ಅರ್ಹರಿಗೆ 4 ಮನೆ, 3 ಪ್ರಯಾಣಿಕರ ತಂಗುದಾಣ, ಸೇವಾ ಸದನ ಶಿಲಾನ್ಯಾಸ ಸೇರಿದಂತೆ 50 ಸೇವಾ ಚಟುವಟಿಕೆಗಳ ಮೂಲಕ ಲಯನ್ಸ್ ಸೇವೆ ಜನರ ಹೃದಯ ಮುಟ್ಟಿದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ‌. ಮೆಲ್ವಿನ್ ಡಿಸೋಜ ಹೇಳಿದರು.


ನ.4 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ ನೀಡಿದ ಅವರು ಇಡೀ ದಿನದ ಸೇವಾ ಚಟುವಟಿಕೆಯಲ್ಲಿ ಭಾಗಿಯಾಗಿ ಸಂಜೆಯ ಸಾರ್ವಜನಿಕ ಅಧಿವೇಶನದಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಮಾತನಾಡಿ, ಎಲ್ಲ ಸದಸ್ಯರ ಸಂಯುಕ್ತ ಸಹಕಾರದಿಂದ ಸೇವಾ ಪರ್ವ ಮುನ್ನಡೆಯುತ್ತಿದೆ. ಸಂಘಟನಾತ್ಮಕ ಪ್ರಯತ್ನವೇ ನಮ್ಮ ಯಶಸ್ಸಿಗೆ ಮುನ್ನುಡಿ ಎಂದರು.‌


ಜಿಲ್ಲಾ ಲಿಯೋ ವಿಭಾಗದ ಅಧ್ಯಕ್ಷೆ ಡಾ. ರಂಜಿತಾ ಶೆಟ್ಟಿ ಮಾತನಾಡಿ, ಸುವರ್ಣ ಮಹೋತ್ಸವ ವರ್ಷದ ಸಂಭ್ರಮ ಮತ್ತು ಸೇವಾ ಚಟುವಟಿಕೆ ಜೊತೆಗೆ ಬೆಳ್ತಂಗಡಿಯಿಂದ ಹೊಸದಾಗಿ ಲಿಯೋ ಕ್ಲಬ್ ಕೂಡ ಸೇರ್ಪಡೆಯಾಗಲಿ ಎಂದು ಹಾರೈಸಿದರು.


ವೇದಿಕೆಯಲ್ಲಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಾಲ್ಡ್ ಡಿಸೋಜಾ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೋ, ವಲಯಾಧ್ಯಕ್ಷರಾದ ಎಂ.ಕೆ‌ ದಿನೇಶ್, ಪ್ರತಿಭಾ ಹೆಬ್ಬಾರ್, ಪ್ರಾಂತ್ಯದ ವಿವಿಧ ಕ್ಲಬ್ ಗಳ ಅಧ್ಯಕ್ಷರುಗಳು, ಬೆಳ್ತಂಗಡಿ ನಿಕಟಪೂರ್ವ ಅಧ್ಯಕ್ಷ ಡಾ. ದೇವಿ ಪ್ರಸಾದ್ ಉಪಸ್ಥಿತರಿದ್ದರು.


ರಾಜು ಶೆಟ್ಟಿ ವೇದಿಕೆಗೆ ಆಹ್ವಾನಿಸಿದರು. ಪ್ರಾಪ್ತಿ ಶೆಟ್ಟಿ ಪ್ರಾರ್ಥಿಸಿದರು. ಪುರುಷೋತ್ತಮ ಶೆಟ್ಟಿ ನೀತಿ ಸಂಹಿತೆ, ಗೋಪಾಲಕೃಷ್ಣ ಭಟ್ ಕಾಂಚೋಡು ಧ್ವಜವಂದನೆ ನಡೆಸಿದರು.
ಸ್ಥಾಪಕ ದಿನಾಚರಣೆ ಪ್ರಯುಕ್ತ ಸ್ಥಾಪಕ ಸದಸ್ಯರಾದ ಎಂ.ಜಿ ಶೆಟ್ಟಿ ಮತ್ತು ವಿ.ಆರ್ ನಾಯ್ಕ್ ಅವರನ್ನು ಸನ್ಮಾನಿಸಿ‌ ಗೌರವಿಸಲಾಯಿತು. ಕಾರ್ಯದರ್ಶಿ ಅನಂತಕೃಷ್ಣ ವರದಿ ಮಂಡಿಸಿದರು. ಧರಣೇಂದ್ರ ಕೆ ಜೈನ್ ನಿರೂಪಿಸಿದರು. ವಸಂತ ಶೆಟ್ಟಿ ರಾಜ್ಯಪಾಲರನ್ನು ಪರಿಚಯಿಸಿದರು.


ಕ್ಲಬ್ ಬುಲೆಟಿನ್ ಸಂಪಾದಕ ಕೃಷ್ಣ ಆಚಾರ್, ಜಯರಾಮ ಭಂಡಾರಿ, ದತ್ತಾತ್ರೇಯ ಜಿ, ಹೇಮಂತ ರಾವ್, ಮಂಜುನಾಥ ಜಿ, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
ಹೊಸ ಸದಸ್ಯರ ಸೇರ್ಪಡೆ, ಸನ್ಮಾನ, ಗುರುತಿಸುವಿಕೆ ಪ್ರಕ್ರಿಯೆಗಳು ನಡೆದವು. ಸಹಭೋಜನ, ಸಮಾರಂಭಕ್ಕೂ ಮುನ್ನ ರಾಜ್ಯಪಾಲರನ್ನು ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಭಾಂಗಣಕ್ಕೆ ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ಕರೆತರಲಾಯಿತು. ಕೋಶಾಧಿಕಾರಿ ಶುಭಾಷಿಣಿ ವಂದಿಸಿದರು‌.

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya
error: Content is protected !!