September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಜರಗಿತು.


ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಅವಕಾಶ ಸಿಕ್ಕಾಗ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಟಲ್ ಬ್ಯಾಡ್ಮಿಂಟನ್ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವಂತಹ ಕ್ರೀಡೆ. ಕ್ರೀಡಾಪಟುಗಳು ತೀರ್ಪುಗಾರು ನೀಡುವ ತೀರ್ಪನ್ನು ಸಮಾನಮನಸ್ಕರಾಗಿ ಸ್ವೀಕರಿಸುವಂತಗಾಬೇಕು ಎಂದು ಅವರು ಹೇಳಿದರು.


ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು. ಸೋತಾಗ ನಿರಾಶರಾಗುವುದು, ಗೆದ್ದಾಗ ಗರ್ವಪಡುವುದು ಆಗಬಾರದು ಎಂದು ಸಂದೇಶ ನೀಡಿದರು.
ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ|ಪ್ರಕಾಶ್ ಡಿಸೋಜ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಸ್ವಾಗತಿಸಿ, ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.


ಫಲಿತಾಂಶ: ಬಾಲಕರ ವಿಭಾಗದಲ್ಲಿ ಎಸ್.ಡಿ.ಎಎಸ್.ಡಿ.ಎಂ ಪ.ಪೂ ಕಾಲೇಜು ಪ್ರಥಮ , ವಾಣಿ ಪ.ಪೂ ಕಾಲೇಜು ದ್ವಿತೀಯ , ಬಾಲಕಿಯರ ವಿಭಾಗದಲ್ಲಿ ವಾಣಿ ಪ.ಪೂ ಕಾಲೇಜು ಪ್ರಥಮ ಹಾಗೂ ಗುರುದೇವ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya
error: Content is protected !!