ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ  ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡಿದ್ದಾರೆ. ನೇರ ನಡೆ-ನುಡಿಯ ಅವರು ಸರಳ ವ್ಯಕ್ತಿತ್ವವನ್ನು ಹೊಂದಿದ್ದರು.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

Leave a Comment

error: Content is protected !!