ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Leave a Comment

error: Content is protected !!