23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya
error: Content is protected !!