22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!