24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ  ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡಿದ್ದಾರೆ. ನೇರ ನಡೆ-ನುಡಿಯ ಅವರು ಸರಳ ವ್ಯಕ್ತಿತ್ವವನ್ನು ಹೊಂದಿದ್ದರು.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

Related posts

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!