September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya
error: Content is protected !!