ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು, ಪರಿಶೀಲಿಸಿದಾಗ ಸೇತುವೆ ಕೆಳಗೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿದೆ.

ಈಗಾಗಲೇ ಪೊಲೀಸ್ ಹಾಗೂ ಪಂಚಾಯತ್‌ಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

Leave a Comment

error: Content is protected !!