23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya
error: Content is protected !!