September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

ಬೆಳ್ತಂಗಡಿ : ಸೌಜನ್ಯಾ, ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಈಗ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣ ನ್ಯಾಯಾಲಯ ತೀರ್ಪು ನೀಡಿದ 4 ತಿಂಗಳ ಬಳಿಕ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಕರಣದ ಆರೋಪಿ ಸಂತೋಷ್ ರಾವ್‌ ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. 2012ರ ಅಕ್ಟೋಬರ್ 12ರಂದು ಸೌಜನ್ಯಾ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್‌ನನ್ನು ಬಂಧಿಸಿದ್ದರು. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿ ನಿರ್ದೋಷಿ ಎಂದು ವಿಚಾರಣ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Related posts

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya
error: Content is protected !!