22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

ಬೆಳ್ತಂಗಡಿ : ಸೌಜನ್ಯಾ, ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಈಗ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣ ನ್ಯಾಯಾಲಯ ತೀರ್ಪು ನೀಡಿದ 4 ತಿಂಗಳ ಬಳಿಕ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಕರಣದ ಆರೋಪಿ ಸಂತೋಷ್ ರಾವ್‌ ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. 2012ರ ಅಕ್ಟೋಬರ್ 12ರಂದು ಸೌಜನ್ಯಾ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್‌ನನ್ನು ಬಂಧಿಸಿದ್ದರು. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿ ನಿರ್ದೋಷಿ ಎಂದು ವಿಚಾರಣ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Related posts

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya
error: Content is protected !!