April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಇಬ್ಬರು ಯುವತಿಯವರು ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತವಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವೃತ್ತನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.ಪ್ರಟ್ರಮೆ ಗ್ರಾಮದ ನಿವಾಸಿಗಳಾದ ರಕ್ಷಿತಾ ಎಂಬ ದಲಿತ ಯುವತಿ ಹಾಗೂ ಲಾವಣ್ಯ ಎಂಬ ಯುವತಿ ಕಳೆದ ಎಪ್ರಿಲ್ ತಿಂಗಳಿನಲ್ಲಿ ಮೃತಪಟ್ಟಿದ್ದರು. ಹೊಟ್ಟೆ ನೋವು ಎಂದು ಆಸ್ಪತ್ರೆ ಸೇರಿದ್ದ ಇಬ್ಬರು ಯುವತಿಯರು ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಇವರು ವಿಷ ಸೇವಿಸಿರುವುದು ದೃಢ ಪಟ್ಟಿತ್ತು. ಘಟನೆ ನಡೆದು ಎಂಟು ತಿಂಗಳು ಕಳೆದರೂ ಯಾವುದೇ ಪ್ರಗತಿಯಾಗದ ಹಿನ್ನೆಲೆಯಲ್ಲಿ ಈಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಕಾಗಿದೆಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಂ ಭಟ್ , ದಲಿತ ಮುಖಂಡರಾದ ಈಶ್ವರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!