July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!