24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

ಬೆಳ್ತಂಗಡಿ : ಸೌಜನ್ಯಾ, ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಈಗ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣ ನ್ಯಾಯಾಲಯ ತೀರ್ಪು ನೀಡಿದ 4 ತಿಂಗಳ ಬಳಿಕ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಕರಣದ ಆರೋಪಿ ಸಂತೋಷ್ ರಾವ್‌ ನಿರ್ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. 2012ರ ಅಕ್ಟೋಬರ್ 12ರಂದು ಸೌಜನ್ಯಾ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್‌ನನ್ನು ಬಂಧಿಸಿದ್ದರು. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿ ನಿರ್ದೋಷಿ ಎಂದು ವಿಚಾರಣ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Related posts

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!