April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.


ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ ನೇಮಕಗೊಂಡ ಅವರು ಬಳಿಕ 2000 ದಿಂದ 2004 ರವರೆಗೆ ವೇಣೂರು ಶಾಖೆಯಲ್ಲಿ ಕಿರಿಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಸಹಾಯಕ ಇಂಜಿನಿಯರ್ ಆಗಿ ಭಡ್ತಿಗೊಂಡು ಬೆಳ್ತಂಗಡಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಇದೇ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಸಂದರ್ಭ 2016 ರಲ್ಲಿ ಇವರು ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಭಡ್ತಿಗೊಂಡು ಬೆಳ್ತಂಗಡಿಯಲ್ಲೇ ಮುಂದುವರಿದ್ದರು. ಶಿವಶಂಕರ್ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 26 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶಗಳಿಗೆ, ಗುಡ್ಡಗಾಡು ಪ್ರದೇಶಗಳಿಗೆ ಸರಕಾರದಿಂದ ಮಂಜೂರಾದ ವಿದ್ಯುತ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗುವಲ್ಲಿ ಶ್ರಮ ವಹಿಸಿ, ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು.

Related posts

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya
error: Content is protected !!