22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.


ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ ನೇಮಕಗೊಂಡ ಅವರು ಬಳಿಕ 2000 ದಿಂದ 2004 ರವರೆಗೆ ವೇಣೂರು ಶಾಖೆಯಲ್ಲಿ ಕಿರಿಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಸಹಾಯಕ ಇಂಜಿನಿಯರ್ ಆಗಿ ಭಡ್ತಿಗೊಂಡು ಬೆಳ್ತಂಗಡಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಇದೇ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಸಂದರ್ಭ 2016 ರಲ್ಲಿ ಇವರು ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಭಡ್ತಿಗೊಂಡು ಬೆಳ್ತಂಗಡಿಯಲ್ಲೇ ಮುಂದುವರಿದ್ದರು. ಶಿವಶಂಕರ್ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 26 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶಗಳಿಗೆ, ಗುಡ್ಡಗಾಡು ಪ್ರದೇಶಗಳಿಗೆ ಸರಕಾರದಿಂದ ಮಂಜೂರಾದ ವಿದ್ಯುತ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗುವಲ್ಲಿ ಶ್ರಮ ವಹಿಸಿ, ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!