23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.


ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ ನೇಮಕಗೊಂಡ ಅವರು ಬಳಿಕ 2000 ದಿಂದ 2004 ರವರೆಗೆ ವೇಣೂರು ಶಾಖೆಯಲ್ಲಿ ಕಿರಿಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಸಹಾಯಕ ಇಂಜಿನಿಯರ್ ಆಗಿ ಭಡ್ತಿಗೊಂಡು ಬೆಳ್ತಂಗಡಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಇದೇ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಸಂದರ್ಭ 2016 ರಲ್ಲಿ ಇವರು ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಭಡ್ತಿಗೊಂಡು ಬೆಳ್ತಂಗಡಿಯಲ್ಲೇ ಮುಂದುವರಿದ್ದರು. ಶಿವಶಂಕರ್ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 26 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶಗಳಿಗೆ, ಗುಡ್ಡಗಾಡು ಪ್ರದೇಶಗಳಿಗೆ ಸರಕಾರದಿಂದ ಮಂಜೂರಾದ ವಿದ್ಯುತ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗುವಲ್ಲಿ ಶ್ರಮ ವಹಿಸಿ, ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು.

Related posts

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya
error: Content is protected !!