30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ


ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್&ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಟಿ. ಜಯಾನಂದಗೌಡಇವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಿಳಿಸುವುದರೊಂದಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾರತ್‌ ಸ್ಕೌಟ್ಸ್& ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಪ್ರಮೀಳಾ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್, ಕಬ್ & ಬುಲ್‌ಬುಲ್‌ತಂಡದ ಬಗ್ಗೆ ಮಾರ್ಗದರ್ಶನ ನೀಡಿದರು.


ಸಮಾರಂಭದ ಅಧ್ಯಕ್ಷರಾದ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ರಾಜ್ಯ ಸಂಸ್ಥೆಯ ಆದೇಶದಂತೆ ಜಿಲ್ಲಾಸಂಸ್ಥೆಯಿಂದ ಬಂದಂತಹ ಧ್ವಜದ ಚೀಟಿ ಬಿಡುಗಡೆಗೊಳಿಸಿ, ಸ್ಕೌಟ್ಸ್ &ಗೈಡ್ಸ್‌ನಲ್ಲಿ ಸಿಗುವ ಎಲ್ಲಾ ಸದಾವಕಾಶಗಳನ್ನು ಬಳಸಿಕೊಳ್ಳಬೇಕೆಂಬ ಆಶಯದೊಂದಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಗೈಡ್ ಲೀಡರ್‌ಗಳಾದ ಶ್ರೀಮತಿ ಶೋಭಾ ನವೀನ್ , ಶ್ರೀಮತಿ ಸುಮಲತಾ ಎ, ಕಬ್ ಮಾಸ್ಟರ್‌ಕು| ಹೇಮಲತಾ ಮತ್ತು ಫ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.


ಸ್ಕೌಟ್ಸ್&ಗೈಡ್ಸ್ ದಳದ ವಿದ್ಯಾರ್ಥಿಗಳಾದ ಕು| ಮಾನ್ಯ ಮತ್ತು ಮಾ|ಕುಶನ್‌ಕಾರ್ಯಕ್ರಮ ನಿರೂಪಿಸಿ, ಫ್ಲಾಕ್ ಲೀಡರ್ ನಮಿತಾ ಸ್ವಾಗತಿಸಿ, ಕಬ್ ಮಾಸ್ಟರ್ ಹೇಮಲತಾ ವಂದನಾರ್ಪಣೆಗೈದರು.

Related posts

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
error: Content is protected !!