23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ


ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್&ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಟಿ. ಜಯಾನಂದಗೌಡಇವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಿಳಿಸುವುದರೊಂದಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾರತ್‌ ಸ್ಕೌಟ್ಸ್& ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಪ್ರಮೀಳಾ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್, ಕಬ್ & ಬುಲ್‌ಬುಲ್‌ತಂಡದ ಬಗ್ಗೆ ಮಾರ್ಗದರ್ಶನ ನೀಡಿದರು.


ಸಮಾರಂಭದ ಅಧ್ಯಕ್ಷರಾದ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ರಾಜ್ಯ ಸಂಸ್ಥೆಯ ಆದೇಶದಂತೆ ಜಿಲ್ಲಾಸಂಸ್ಥೆಯಿಂದ ಬಂದಂತಹ ಧ್ವಜದ ಚೀಟಿ ಬಿಡುಗಡೆಗೊಳಿಸಿ, ಸ್ಕೌಟ್ಸ್ &ಗೈಡ್ಸ್‌ನಲ್ಲಿ ಸಿಗುವ ಎಲ್ಲಾ ಸದಾವಕಾಶಗಳನ್ನು ಬಳಸಿಕೊಳ್ಳಬೇಕೆಂಬ ಆಶಯದೊಂದಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಗೈಡ್ ಲೀಡರ್‌ಗಳಾದ ಶ್ರೀಮತಿ ಶೋಭಾ ನವೀನ್ , ಶ್ರೀಮತಿ ಸುಮಲತಾ ಎ, ಕಬ್ ಮಾಸ್ಟರ್‌ಕು| ಹೇಮಲತಾ ಮತ್ತು ಫ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.


ಸ್ಕೌಟ್ಸ್&ಗೈಡ್ಸ್ ದಳದ ವಿದ್ಯಾರ್ಥಿಗಳಾದ ಕು| ಮಾನ್ಯ ಮತ್ತು ಮಾ|ಕುಶನ್‌ಕಾರ್ಯಕ್ರಮ ನಿರೂಪಿಸಿ, ಫ್ಲಾಕ್ ಲೀಡರ್ ನಮಿತಾ ಸ್ವಾಗತಿಸಿ, ಕಬ್ ಮಾಸ್ಟರ್ ಹೇಮಲತಾ ವಂದನಾರ್ಪಣೆಗೈದರು.

Related posts

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya
error: Content is protected !!