September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ


ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್&ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಟಿ. ಜಯಾನಂದಗೌಡಇವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಿಳಿಸುವುದರೊಂದಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾರತ್‌ ಸ್ಕೌಟ್ಸ್& ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಪ್ರಮೀಳಾ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್, ಕಬ್ & ಬುಲ್‌ಬುಲ್‌ತಂಡದ ಬಗ್ಗೆ ಮಾರ್ಗದರ್ಶನ ನೀಡಿದರು.


ಸಮಾರಂಭದ ಅಧ್ಯಕ್ಷರಾದ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ರಾಜ್ಯ ಸಂಸ್ಥೆಯ ಆದೇಶದಂತೆ ಜಿಲ್ಲಾಸಂಸ್ಥೆಯಿಂದ ಬಂದಂತಹ ಧ್ವಜದ ಚೀಟಿ ಬಿಡುಗಡೆಗೊಳಿಸಿ, ಸ್ಕೌಟ್ಸ್ &ಗೈಡ್ಸ್‌ನಲ್ಲಿ ಸಿಗುವ ಎಲ್ಲಾ ಸದಾವಕಾಶಗಳನ್ನು ಬಳಸಿಕೊಳ್ಳಬೇಕೆಂಬ ಆಶಯದೊಂದಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಗೈಡ್ ಲೀಡರ್‌ಗಳಾದ ಶ್ರೀಮತಿ ಶೋಭಾ ನವೀನ್ , ಶ್ರೀಮತಿ ಸುಮಲತಾ ಎ, ಕಬ್ ಮಾಸ್ಟರ್‌ಕು| ಹೇಮಲತಾ ಮತ್ತು ಫ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.


ಸ್ಕೌಟ್ಸ್&ಗೈಡ್ಸ್ ದಳದ ವಿದ್ಯಾರ್ಥಿಗಳಾದ ಕು| ಮಾನ್ಯ ಮತ್ತು ಮಾ|ಕುಶನ್‌ಕಾರ್ಯಕ್ರಮ ನಿರೂಪಿಸಿ, ಫ್ಲಾಕ್ ಲೀಡರ್ ನಮಿತಾ ಸ್ವಾಗತಿಸಿ, ಕಬ್ ಮಾಸ್ಟರ್ ಹೇಮಲತಾ ವಂದನಾರ್ಪಣೆಗೈದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya
error: Content is protected !!