25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ


ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್&ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಟಿ. ಜಯಾನಂದಗೌಡಇವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಿಳಿಸುವುದರೊಂದಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾರತ್‌ ಸ್ಕೌಟ್ಸ್& ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಪ್ರಮೀಳಾ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್, ಕಬ್ & ಬುಲ್‌ಬುಲ್‌ತಂಡದ ಬಗ್ಗೆ ಮಾರ್ಗದರ್ಶನ ನೀಡಿದರು.


ಸಮಾರಂಭದ ಅಧ್ಯಕ್ಷರಾದ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ರಾಜ್ಯ ಸಂಸ್ಥೆಯ ಆದೇಶದಂತೆ ಜಿಲ್ಲಾಸಂಸ್ಥೆಯಿಂದ ಬಂದಂತಹ ಧ್ವಜದ ಚೀಟಿ ಬಿಡುಗಡೆಗೊಳಿಸಿ, ಸ್ಕೌಟ್ಸ್ &ಗೈಡ್ಸ್‌ನಲ್ಲಿ ಸಿಗುವ ಎಲ್ಲಾ ಸದಾವಕಾಶಗಳನ್ನು ಬಳಸಿಕೊಳ್ಳಬೇಕೆಂಬ ಆಶಯದೊಂದಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಗೈಡ್ ಲೀಡರ್‌ಗಳಾದ ಶ್ರೀಮತಿ ಶೋಭಾ ನವೀನ್ , ಶ್ರೀಮತಿ ಸುಮಲತಾ ಎ, ಕಬ್ ಮಾಸ್ಟರ್‌ಕು| ಹೇಮಲತಾ ಮತ್ತು ಫ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.


ಸ್ಕೌಟ್ಸ್&ಗೈಡ್ಸ್ ದಳದ ವಿದ್ಯಾರ್ಥಿಗಳಾದ ಕು| ಮಾನ್ಯ ಮತ್ತು ಮಾ|ಕುಶನ್‌ಕಾರ್ಯಕ್ರಮ ನಿರೂಪಿಸಿ, ಫ್ಲಾಕ್ ಲೀಡರ್ ನಮಿತಾ ಸ್ವಾಗತಿಸಿ, ಕಬ್ ಮಾಸ್ಟರ್ ಹೇಮಲತಾ ವಂದನಾರ್ಪಣೆಗೈದರು.

Related posts

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya
error: Content is protected !!