23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ


ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್&ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಟಿ. ಜಯಾನಂದಗೌಡಇವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಿಳಿಸುವುದರೊಂದಿಗೆ ಶುಭಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾರತ್‌ ಸ್ಕೌಟ್ಸ್& ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಪ್ರಮೀಳಾ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್, ಕಬ್ & ಬುಲ್‌ಬುಲ್‌ತಂಡದ ಬಗ್ಗೆ ಮಾರ್ಗದರ್ಶನ ನೀಡಿದರು.


ಸಮಾರಂಭದ ಅಧ್ಯಕ್ಷರಾದ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ರಾಜ್ಯ ಸಂಸ್ಥೆಯ ಆದೇಶದಂತೆ ಜಿಲ್ಲಾಸಂಸ್ಥೆಯಿಂದ ಬಂದಂತಹ ಧ್ವಜದ ಚೀಟಿ ಬಿಡುಗಡೆಗೊಳಿಸಿ, ಸ್ಕೌಟ್ಸ್ &ಗೈಡ್ಸ್‌ನಲ್ಲಿ ಸಿಗುವ ಎಲ್ಲಾ ಸದಾವಕಾಶಗಳನ್ನು ಬಳಸಿಕೊಳ್ಳಬೇಕೆಂಬ ಆಶಯದೊಂದಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಗೈಡ್ ಲೀಡರ್‌ಗಳಾದ ಶ್ರೀಮತಿ ಶೋಭಾ ನವೀನ್ , ಶ್ರೀಮತಿ ಸುಮಲತಾ ಎ, ಕಬ್ ಮಾಸ್ಟರ್‌ಕು| ಹೇಮಲತಾ ಮತ್ತು ಫ್ಲಾಕ್ ಲೀಡರ್ ಶ್ರೀಮತಿ ನಮಿತಾ ಉಪಸ್ಥಿತರಿದ್ದರು.


ಸ್ಕೌಟ್ಸ್&ಗೈಡ್ಸ್ ದಳದ ವಿದ್ಯಾರ್ಥಿಗಳಾದ ಕು| ಮಾನ್ಯ ಮತ್ತು ಮಾ|ಕುಶನ್‌ಕಾರ್ಯಕ್ರಮ ನಿರೂಪಿಸಿ, ಫ್ಲಾಕ್ ಲೀಡರ್ ನಮಿತಾ ಸ್ವಾಗತಿಸಿ, ಕಬ್ ಮಾಸ್ಟರ್ ಹೇಮಲತಾ ವಂದನಾರ್ಪಣೆಗೈದರು.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!