26.5 C
ಪುತ್ತೂರು, ಬೆಳ್ತಂಗಡಿ
September 20, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!