30.8 C
ಪುತ್ತೂರು, ಬೆಳ್ತಂಗಡಿ
April 29, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddi Udaya
error: Content is protected !!