25.1 C
ಪುತ್ತೂರು, ಬೆಳ್ತಂಗಡಿ
August 5, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya
error: Content is protected !!