25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

ಬೆಳ್ತಂಗಡಿ : ಆಂಬುಲೆನ್ಸ್ ಇರುವುದು ಗಂಭೀರವಾಗಿರುವ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದರು. ಆದರೆ ಕೊಟ್ಟಿಗೆಹಾರ ಆಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಘಟನೆ ವರದಿಯಾಗಿದೆ.

ಚಿಕ್ಕಮಗಳೂರಿನ ಕೊಟ್ಟಿಗಾರದಿಂದ ಚಾರ್ಮಾಡಿಯಾಗಿ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ ರೂ. 4,500/- ದಂಡ ಹಾಕಿದ್ದಾರೆ.

Related posts

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya
error: Content is protected !!