May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತರಾದ ಕಬ್ಸ್ , ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ವಿಧಾನ ಪರಿಷತ್ತು ಸದಸ್ಯ ಕೆ ಹರೀಶ್ ಕುಮಾರ್ ರವರು ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಮಾತನಾಡಿ ಜೀವನದ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುದನ್ನು ಸ್ಕೌಟ್ಸ್ ಗೈಡ್ ನ ಶಿಕ್ಷಣದಿಂದ ಪಡೆಯಬಹುದು. ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಣದಿಂದ ಮಕ್ಕಳಲ್ಲಿ ಆತ್ಮವಿಶ್ವಾಸವ, ಹಾಗೂ ನಾಯಕತ್ವ ಗುಣವು ಬೆಳೆಯುತ್ತದೆ ಎಂದು ಮಕ್ಕಳಿಗೆ ತಿಳಿಯಪಡಿಸಿದರು.


ಖಾವಂದರ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವು ಹಾಗೂ ಜೀವನದ ಮೌಲ್ಯಗಳು ದೊರೆಯುವುದು ಈ ಶಿಕ್ಷಣ ಸಂಸ್ಥೆಯ ವಿಶೇಷ ಎಂದು ತಿಳಿಯಪಡಿಸಿದರು.


ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದು, ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವಿಶ್ವದ ಅತ್ಯಂತ ಹಿರಿಯ ಸೇವಾ ಸಂಸ್ಥೆಯಾದ ಭಾರತ್ ಸ್ಕೌಟ್ಸ್ ಗೈಡ್ಸ್ ಗಳಿಂದ ಹಲವಾರು ಸಮಾಜಮುಖಿ ಹಾಗೂ ಮಕ್ಕಳ ಸರ್ವತೋಮುಖ ವ್ಯಕ್ತಿತ್ವವನ್ನು ಸಮಾಜಕ್ಕೆ ಪರಿಚಯಿಸುವಂತಹ ಕಾರ್ಯಗಳು ಈ ಸ್ಕೌಟ್ ಗೈಡ್ಸ್ ಗಳಿಂದ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಗುರಿ ಎಷ್ಟು ಮುಖ್ಯವೋ, ಅದನ್ನು ತಲುಪುವ ದಾರಿಯೂ ಅಷ್ಟೇ ಮುಖ್ಯ, ಶಿಕ್ಷಣ ಅಂದರೆ ಕೇವಲ ಅಂಕಗಳಿಗೆ ಸೀಮಿತವಾಗದೆ ಸರ್ವತೋಮುಖ ವ್ಯಕ್ತಿತ್ವ ವಿಕಸನ ಆಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಮಂಜುನಾಥ ಸಹಕರಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸ್ಕೌಟ್ ಮತ್ತು ಗೈಡ್ ಸಂಯೋಜಕ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!