25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ :ಇಲ್ಲಿಯ ಮಾಯಿಲಕೋಟೆ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಸಿಕ್ಕಿಹಾಕಿಕೊಂಡ ಘಟನೆ ನ.10ರಂದು ನಡೆದಿದೆ.

ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದವರ ಬಗ್ಗೆ ಒಂದು ತಿಂಗಳೊಳಗೆ ಸುಳಿವು ಸಿಗುವಂತೆ ದೇವಸ್ಥಾನದಲ್ಲಿ ಪ್ರಾರ್ಥಿಸಲಾಗಿತ್ತು. ಅಂತೆಯೇ ದೇವರ ಕಾರ್ಣಿಕದಿಂದ ಒಂದು ತಿಂಗಳೊಳಗೆ ಕಳ್ಳರು ಪತ್ತೆಯಾಗಿದ್ದಾರೆ.

ನ.10 ರಂದು ಮಧ್ಯಾಹ್ನದ ಸಮಯ ಕಳ್ಳರು ಕಳ್ಳತನ ಮಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡದಾದ ಶಬ್ದವೊಂದು ಕೇಳಿಸಿದ್ದು ಪರಿಸರದ ಜನರೆಲ್ಲ ಒಟ್ಟಾಗಿ ದೇವಸ್ಥಾನದ ಬಳಿ ತೆರಳಿದಾಗ ಕಳ್ಳ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಎನ್ನಲಾಗಿದೆ. ತಕ್ಷಣ ಸ್ಥಳೀಯರ ಸಹಕಾರದಿಂದ ಕಳ್ಳನನ್ನು ಹಿಡಿದು ಧರ್ಮಸ್ಥಳ ಪೊಲೀಸ್ ಠಾಣೆಗೆ ಒಪ್ಪಿಸಲಾಯಿತು.


ಕಳ್ಳತನಕ್ಕೆ ಯತ್ನಿಸಿದ್ದವನನ್ನು ಹುಬ್ಬಳ್ಳಿಯ ಮಂಜುನಾಥ (19.ವ) ಎಂದು ಗುರುತಿಸಲಾಗಿದ್ದು, ಈತನ ಜೊತೆಗೆ ಸಹಕರಿಸಲು ಇನ್ನಿತರರು ಇದ್ದಾರೆಯೇ ಎಂಬುದನ್ನು ಮುಂದಿನ ತನಿಖೆಯಲ್ಲಿ ತಿಳಿಯಬೇಕಿದೆ.

ಮಾಯಿಲಕೋಟೆಯಲ್ಲಿ ಕಳ್ಳತನ ನಡೆಸುವ ಮೊದಲು ಇಲ್ಲೇ ಸಮೀಪದ ಪುತ್ತೆ ಎಂಬಲ್ಲಿನ ವ್ಯಕ್ತಿ ಒಬ್ಬರ ರೂ 35000 ಬೆಲೆ ಬಾಳುವ ಸೈಕಲನ್ನು ಈತ ಕದ್ದಿದ್ದ ಎನ್ನಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!