May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

ಬೆಳ್ತಂಗಡಿ: ಬೆಂಗಳೂರಿನಿಂದ ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ  ಮಾಜಿ ಸಚಿವ ಹಾಗು ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಅವರು  ಸೈಕಲ್ ಯಾತ್ರೆ ಕೈಗೊಂಡು  ಧರ್ಮಸ್ಥಳದಲ್ಲಿ  ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.  ಬುಧವಾರ (ನ. 8)ಮುಂಜಾನೆ ಬೆಂಗಳೂರಿನಿಂದ ಹೊರಟ ಅವರು ನ.1೦ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ತನ್ನ ಸೈಕಲ್ ಯಾತ್ರೆಯನ್ನು ಸಮಾಪ್ತಿಗೊಳಿಸಿದ್ದಾರೆ. 

ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಎಂಟು ಜನ ಸಹಸವಾರರ ಜತೆಗೆ ಮೂರು ದಿನಗಳ  ಸೈಕಲ್ ಯಾತ್ರೆಯನ್ನು  ಯಶಸ್ವಿಯಾಗಿ ಪೂರೈಸಿದ ಶಾಸಕ ಸುರೇಶ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ಶ್ರೀ ಸ್ವಾಮಿಯ ಸೇವೆ ಗೈದಿದ್ದಾರೆ. ಸುರೇಶ ಕುಮಾರ್ ಜತೆಗೆ ಅಯ್ಯಪ್ಪ, ಸಾಗರ್ ನಾಯ್ಡು, ಹರೀಶ್, ರಾಘವ್,ದಿವಾಕರ್, ಮೋಹನ್, ಬಾಲು  ಮತ್ತು ಕಿರಣ್ ಸಹಸವಾರರಾಗಿ ಪಾಲ್ಗೊಂಡಿದ್ದರು. 2014ರ ನವೆಂಬರ್ ನಲ್ಲಿ  ಶಾಸಕ ಸುರೇಶ್ ಕುಮಾರ್ ಎಂಟು ದಿನಗಳ  ಕಾಲ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯುತ್ರೆ  ಮೂಲಕ  ಸಾಗಿ ಬಂದಿದ್ದರು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya
error: Content is protected !!