24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

ಬೆಳ್ತಂಗಡಿ: ಬೆಂಗಳೂರಿನಿಂದ ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ  ಮಾಜಿ ಸಚಿವ ಹಾಗು ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಅವರು  ಸೈಕಲ್ ಯಾತ್ರೆ ಕೈಗೊಂಡು  ಧರ್ಮಸ್ಥಳದಲ್ಲಿ  ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.  ಬುಧವಾರ (ನ. 8)ಮುಂಜಾನೆ ಬೆಂಗಳೂರಿನಿಂದ ಹೊರಟ ಅವರು ನ.1೦ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ತನ್ನ ಸೈಕಲ್ ಯಾತ್ರೆಯನ್ನು ಸಮಾಪ್ತಿಗೊಳಿಸಿದ್ದಾರೆ. 

ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಎಂಟು ಜನ ಸಹಸವಾರರ ಜತೆಗೆ ಮೂರು ದಿನಗಳ  ಸೈಕಲ್ ಯಾತ್ರೆಯನ್ನು  ಯಶಸ್ವಿಯಾಗಿ ಪೂರೈಸಿದ ಶಾಸಕ ಸುರೇಶ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ಶ್ರೀ ಸ್ವಾಮಿಯ ಸೇವೆ ಗೈದಿದ್ದಾರೆ. ಸುರೇಶ ಕುಮಾರ್ ಜತೆಗೆ ಅಯ್ಯಪ್ಪ, ಸಾಗರ್ ನಾಯ್ಡು, ಹರೀಶ್, ರಾಘವ್,ದಿವಾಕರ್, ಮೋಹನ್, ಬಾಲು  ಮತ್ತು ಕಿರಣ್ ಸಹಸವಾರರಾಗಿ ಪಾಲ್ಗೊಂಡಿದ್ದರು. 2014ರ ನವೆಂಬರ್ ನಲ್ಲಿ  ಶಾಸಕ ಸುರೇಶ್ ಕುಮಾರ್ ಎಂಟು ದಿನಗಳ  ಕಾಲ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯುತ್ರೆ  ಮೂಲಕ  ಸಾಗಿ ಬಂದಿದ್ದರು.

Related posts

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!