April 19, 2025
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!